ಬೆಂಗಳೂರು: 2003 ರಿಂದ 2013 ರವರೆಗೆ ಇಂಧನ ಇಲಾಖೆಯು ಗ್ರಾಹಕರಿಂದ (ನಿಶ್ಚಿತ ಶುಲ್ಕಗಳು) ತೆರಿಗೆಯಾಗಿ ಸಂಗ್ರಹಿಸಿದ್ದ ಸುಮಾರು 800-1,000 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ಮರು ಪಾವತಿಸಬೇಕಾಗಿದೆ.
ಕನಿಷ್ಠ ಸುಂಕದ ಮೇಲಿನ ತೆರಿಗೆ ಅಸಾಂವಿಧಾನಿಕವಾಗಿದ್ದು, ಅರ್ಜಿದಾರರು ಸರಿಯಾದ ದಾಖಲೆಗಳೊಂದಿಗೆ ಪಾವತಿಸಿದ ಹಣವನ್ನು ಪಡೆಯಬಹುದು ಎಂದು ಜೂನ್ 20 ರಂದು ಹೈಕೋರ್ಟ್ ಆದೇಶ ಹೊರಡಿಸಿತ್ತು. ತದನಂತರ ಕೈಗಾರಿಕೆಗಳು ಮತ್ತು ಗ್ರಾಹಕರು ತಮ್ಮ ಹಣ ಪಡೆಯಲು ಬಿಲ್ ಗಳನ್ನು ಸಂಗ್ರಹಿಸುತ್ತಿದ್ದಾರೆ. ಕೆಲವರು ಬಿಲ್ ವಿವರಗಳನ್ನು ಕೋರಿ ಎಸ್ಕಾಂಗಳಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ.
ಈ ಕುರಿತು ಮಾತನಾಡಿದ ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘದ (ಎಫ್ಕೆಸಿಸಿಐ) ಅಧ್ಯಕ್ಷ ಎಂ.ಜಿ.ಬಾಲಕೃಷ್ಣ, ಇದೊಂದು ಮಹತ್ವದ ತೀರ್ಪಾಗಿದ್ದು, ಗ್ರಾಹಕರ ಮೇಲೆ ಅನಗತ್ಯ ಶುಲ್ಕ ವಿಧಿಸುವಂತಿಲ್ಲ ಎಂಬುದನ್ನು ಸರಕಾರ ಗಮನಿಸಬೇಕು. ಈಗ, ಈ ಆದೇಶ ಬಳಸಿಕೊಂಡು ಕೈಗಾರಿಕೆಗಳು ಮರುಪಾವತಿ ಕೋರಿ ನ್ಯಾಯಾಲಯದ ಮುಂದೆ ಮೇಲ್ಮನವಿ ಸಲ್ಲಿಸುತ್ತವೆ. ಕೈಗಾರಿಕೆಗಳ ಸಂಸ್ಥೆಯು 17 ವರ್ಷಗಳ ಸುದೀರ್ಘ ಹೋರಾಟ ನಡೆಸಿತು ಎಂದು ತಿಳಿಸಿದರು.