– ಹಾರಂಗಿ ಡ್ಯಾಂನಿಂದ ಕಾವೇರಿ ನದಿಗೆ 18,000 ಕ್ಯೂಸೆಕ್ ನೀರು ರಿಲೀಸ್
ಮಡಿಕೇರಿ: ವರುಣನ ಆರ್ಭಟಕ್ಕೆ ಕೊಡಗಿನ ಭಾಗಮಂಡಲ ತ್ರಿವೇಣಿ ಸಂಗಮ (Triveni Sangam) ಸಂಪೂರ್ಣವಾಗಿ ಮುಳುಗಡೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಳದಿಂದ ಹಾರಂಗಿ ಡ್ಯಾಂನಿಂದ (Harangai Dam) ಸುಮಾರು 18,000 ಕ್ಯೂಸೆಕ್ ನೀರು ಕಾವೇರಿ ನದಿಗೆ (Cauvery River) ಹರಿಸಲಾಗುತ್ತಿದೆ.
ಕೊಡಗು ಜಿಲ್ಲೆಯಲ್ಲಿ ಮೃಗಶಿರ ಮಳೆಯ (Mrigashira Rain) ಅಬ್ಬರ ಮುಂದುವರೆದಿದೆ. ಕಳೆದ 3-4 ದಿನಗಳಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾವೇರಿ ಉಗಮಸ್ಥಾನ ತಲಕಾವೇರಿ ಭಾಗಮಂಡದಲ್ಲಿ ಮಳೆಯಾಗುತ್ತಿವೆ. ತ್ರಿವೇಣಿ ಸಂಗಮದಲ್ಲಿ ನೀರು ಉಕ್ಕಿ ಹರಿಯುತ್ತಿದೆ. ತ್ರಿವೇಣಿ ಸಂಗಮದ ಉದ್ಯಾನ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಭಂಗಡೇಶ್ಚರ ದೇವಾಲಯ ಆವರಣಕ್ಕೂ ನೀರು ಪ್ರವೇಶ ಮಾಡಿದೆ. ಭಂಗಡೇಶ್ವರ ದೇವಾಲಯ ಆವರಣದ ಅಂಗಡಿ ಮುಂಗಟ್ಟುಗಳಿಗೆ ತೆರವು ಮಾಡುವಂತೆ ಸೂಚನೆ ನೀಡಿದ್ದಾರೆ. ಈಗಾಗಲೇ ನಾಪೋಕ್ಲು- ಅಯ್ಯಂಗೇರಿ -ಸಣ್ಣಪುಲಿಕೊಟ್ಟು ರಸ್ತೆ ಮೇಲೆ ಸುಮಾರು 4 ಅಡಿಯಷ್ಟು ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಇದನ್ನೂ ಓದಿ: ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ತೆರಳಿದ್ದ ಮಹಿಳೆ ನೀರುಪಾಲು
ಕಾವೇರಿ ಜಲಾನಯನ ಪ್ರದೇಶದಲ್ಲಿ ಬಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ಜಲಾಶಯದ ಭದ್ರತೆ ದೃಷ್ಟಿಯಿಂದ ಈಗಾಗಲೇ 4 ಕ್ರಸ್ಟ್ಗೇಟ್ಗಳ ಮೂಲಕ 18 ಸಾವಿರ ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡಲಾಗುತ್ತಿದೆ. ನದಿಪಾತ್ರದ ಜನರು ಮುನ್ನೆಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಮಲೆನಾಡಿನ ಮಳೆಗಾಲದ ಗೆಳೆಯರು!
ಕೊಡಗಿನಲ್ಲಿ ನದಿಗಳೆಲ್ಲವೂ ತುಂಬಿ ಹರಿಯುತ್ತಿವೆ. ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆಗೆ ಕಾವೇರಿ ನದಿ ನೀರು ನುಗ್ಗಿ ಸಂಚಾರ ಸ್ಥಗಿತಗೊಂಡಿದೆ. ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜನ ಕಂಗಾಲಾಗಿದ್ದಾರೆ. ಇದನ್ನೂ ಓದಿ: ಎಲ್ಲಿ ಅಡಗಿರೋದು ಗೊತ್ತಿದೆ – ಈಗ ಹತ್ಯೆ ಮಾಡಲ್ಲ, ಖಮೇನಿ ಶರಣಾಗಬೇಕು: ಟ್ರಂಪ್ ವಾರ್ನಿಂಗ್